Saturday, October 12, 2013

ಕುರುಬ

ಒಂದು ಹಿಂದು ಸಮುದಾಯದ ಹೆಸರು. ಕುರುಬ ಎಂದರೆ ಹುಡುಕುವ ಅಥವ ಪಡೆಯುವ ಎಂದು ಅರ್ಥ ಬರುತ್ತದೆ. ಉದಾಹರಣೆ: ಜೇನು ಕುರುಬ ಜಾತಿ ಎಂದರೆ ಜೇನು ಹುಡುಕುವ ಜಾತಿ. ಕುರುಬರು ಹಾಲುಮತ ಅನುಯಾಯಿಗಳು. ಕುರುಬ ಎಂದರೆ ಜ್ಞಾನವನ್ನು(ಭ) ಹುಡುಕುವವನು (ಕುರು) ಎಂಬ ದಾರ್ಮಿಕ ಅರ್ಥವು ಇದೆ. ಕುರುಬ ಜಾತಿಯು ಅತಿ ಪುರಾತನವಾದ ಜಾತಿ.

ಇತಿಹಾಸ ಪೂರ್ವ

ಕುರುಬ ಜನಾಂಗ ತುಂಬಾ ಪುರಾತನವಾದ ಜನಾಂಗ , ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ಕುರು ವಂಶ ಮತ್ತು ಯದು ವಂಶಗಳ ಪ್ರಸ್ತಾವನೆಯಾಗಿದೆ. ಮಾನವನು ಮೊದಲು ಕಾಡುಗಳಲ್ಲಿ ಬೇಟೆ ಆಡಿ ಮತ್ತು ಅಲೀದು ಗೆಡ್ಡೆ, ಗೆಣಸು ತಿನ್ನುತಿದ್ದ , ಕ್ರಮೇಣ ಅವನು ಪ್ರಾಣಿಗಳನ್ನು ಪಳಗಿಸಿ ಸಾಕ ತೊಡಗಿದ, ಆ ನಂತರ ಅವನು ವ್ಯವಸಾಯ ಮಾಡುವದನ್ನು ಕಲಿತ, ನಂತರ ಅವನು ಹಳ್ಳಿಗಳಲ್ಲಿ ವಾಸಿಸ ತೊಡಗಿದ. ಕುರುಬರು ಈ ಎಲ್ಲ ಮಾನವನ ಆಯಾಮಗಳನ್ನು ದಾಟಿದವರು. ಅತಿ ಪುರಾತನವಾದ ಈ ಸಮುದಾಯದಿಂದ ಕಾಲ ಕ್ರಮೇಣ ಇತರೆ ಜನಾಂಗದವರು ಬೇರೆಯಾಗ ತೊಡಗಿದರು. ಉದಾಹರಣೆಗೆ ವಕ್ಕಲುತನ ಮಾಡುವನು ವಕ್ಕಲಿಗನಾದ, ಬೇಟೆಯಾಡು ವವನು ಬೇಡನಾದ , ಮಡಿಕೆ ಮಾಡುವವನು ಕುಂಬಾರನಾದ , ಈ ಇತರೆ ಜನಾಂಗದವರು ಮಾನವನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನು ಮಾಡತೊಡಗಿದರು. ಹೀಗೆ ಪುರಾತನವಾದ ಕುರುಬ ಮತ್ತು ಯಾದವ ವಂಶಗಳಿಂದ ಸಣ್ಣ ಪುಟ್ಟ ಜಾತಿಗಳು ಹುಟ್ಟಿಕೊಂಡವು.


ಭಾರತ ಇತಿಹಾಸ

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು. ಮೌರ್ಯರ ಮೊದಲ ದೊರೆ ಚಂದ್ರಗುಪ್ತನು ಕುರಿಗಾಹಿಯಾಗಿದ್ದು, ಆಗಿನ ನಂದ ದೊರೆಗಳ ವಿರುದ್ಧ ಸಿಡಿದೆದ್ದು ತನ್ನದೇ ಆದ ಸಾಮ್ರಾಜ್ಯವನ್ನು ಚಾಣಕ್ಯನ ಸಹಾಯದಿಂದ ಕಟ್ಟಿದನು. ಇದರು ಗುರುತಾಗಿ ಭಾರತ ಸರ್ಕಾರವು ನವ ದೆಹಲಿಯಾ ಪಾರ್ಲಿಮೆಂಟ್ ಕಟ್ಟಡದ ೫ನೆ ಮಹಾದ್ವಾರದ ಬಳಿ ಚಂದ್ರಗುಪ್ತನ ಪುತ್ಥಳಿಯನ್ನು ಸ್ಥಾಪನೆ ಮಾಡಿ , ಅದರ ಕೆಳಗೆ " ಕುರಿ ಕಾಯುವ ಹುಡುಗ ತಾನು ಕಟ್ಟಲಿರುವ ಸಾಮ್ರಾಜ್ಯದ ಬಗ್ಗೆ ಕನಸು ಕಾಣುತಿರುವುದು" ಎಂದು ಬರಿಯಲಾಗಿದೆ. ನಂತರ ಕುರುಬ ಗೌಡರು ರಾಷ್ಟ್ರಕೂಟ, ಪಲ್ಲವ, ಹೊಯ್ಸಳ, ದೇವಗಿರಿಯ ಯಾದವ, ಹೊಲ್ಕರ್ ರಾಜರು ಮತ್ತು ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಿದರು.

 

ಇತರೆ ಹೆಸರುಗಳು

ಕುರುಬ, ಆರೆಗುಲ್ಲ, ಗೌಡ , ಕುರುಮ , ಕುರುಂಬ , ದನಗರ್, ಗೊಲ್ಲ , ಯಾದವ , ಅಹಿರ್ , ಹಾಲುಮತ , ಇಡೆಯರ್, ಪಾಲ, ಗದ್ದಿ, ಬಕರ್ವಾಲ್ , ನಾಯ್ಕರ್ , ಹೆಗ್ಗಡೆ , ಅಂಡರ್, ಮಲದರಿ , ಗೊರವರ್ , ದೊಡ್ಡಿ ಗೌಡ , ಗಡರಿ.ಅನೆಕುರುಬ,


ಕರ್ನಾಟಕದ ಕುರುಬ ಗೌಡರು

ಕರ್ನಾಟಕದ ೩ನೆ ಅತಿ ದೊಡ್ಡ ಸಮುದಾಯ, ಕುರುಬ ಗೌಡ ಸಮುದಾಯ. ಕರ್ನಾಟಕದ ಪ್ರಮುಖ ಸಾಮ್ರಾಜ್ಯಗಳನ್ನು ಕಟ್ಟಿದವರು ಕುರುಬ ಗೌಡರು. ರಾಷ್ಟ್ರಕೂಟ , ಹೊಯ್ಸಳ ಮತ್ತು ವಿಜಯನಗರ ಸಾಮ್ರಾಜ್ಯ ಪ್ರಮುಖವಾದವು. ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಿಂದ ದಕ್ಷಿಣ ಭಾರತದಲ್ಲಿ ಹಿಂದೂ ಸಂಸ್ಕೃತಿ ಉಳಿಯುವಂತೆ ಆಯಿತು, ಹಿಂದೂಸಂಸ್ಕೃತಿ ಉಳಿಯಲು ಕಾರಣವಾದವರು ಕುರುಬ ಗೌಡ ಸಹೋದರರಾದ ಹಕ್ಕ ರಾಯ ಮತ್ತು ಬುಕ್ಕ ರಾಯ.


ಸಂಪ್ರಯದ

ಕುರುಬ ಗೌಡರು ಅನಾದಿ ಕಾಲದಿಂದಲೂ ಪ್ರಕೃತಿಯನ್ನು ಪೂಜಿಸಿ ಕೊಂಡು ಬಂದವರು, ಕಲ್ಲನ್ನು ಪೂಜಿಸುವುದು ಪುರಾತನವಾದ ಸಂಪ್ರದಾಯ , ಅದೇ ಸಂಸ್ಕೃತಿ ಬರ ಬರುತ್ತಾ ಶಿವ ಲಿಂಗ ಪೂಜೆಯಾಗಿ ಮಾರ್ಪಟ್ಟಿತು.ಶ್ರೀ ಜಗದ್ಗುರು ರೇವಣ ಸಿದ್ದೇಶ್ವರರು, ಮತ್ತು ಶ್ರೀ ಜಗದ್ಗುರು ಶಾಂತಿಮಯ್ಯ ಒಡೆಯರು ಈ ಜನಾಂಗದ ಆದಿ ಗುರುಗಳು. ಇವರು ಶಿವನ್ನನ್ನು ಬೀರೇಶ್ವರ , ಮೈಲಾರಲಿಂಗ , ಮಾದೇಶ್ವರ , ಮಲ್ಲಪ್ಪ , ಮಲ್ಲಿಕಾರ್ಜುನ ಮುಂತಾದ ಹೆಸರಿನಲ್ಲಿ ಪುಜಿಸುತಾರೆ. ಎಲ್ಲಮ್ಮ , ಭೀಮವ್ವ , ಚೌಡಮ್ಮ ಮುಂತಾದ ಹೆಸರಿನಲ್ಲಿ ಶಕ್ತಿ ದೇವಿಯನ್ನು ಪುಜಿಸುತಾರೆ. ಕರ್ನಾಟಕ ಮತ್ತು ಅಂದ್ರ ಪ್ರದೇಶದ ಬಹುತೇಕ ಹಳ್ಳಿಗಳಲ್ಲಿ ಬೀರೇಶ್ವರ ಅಥವಾ ಮೈಲಾರಲಿಂಗೇಶ್ವರ ದೇವಾಲಯವಿರುತ್ತೆ , ಈ ದೇವಾಲಯಗಳ ಪೂಜಾರಿಗಳು ಕುರುಬ ಗೌಡರಗಿರುತ್ತಾರೆ.

ಕುರುಬ ಗೌಡರ ಹಬ್ಬಗಳು


ಕುರುಬ ಗೌಡರ ಉಪ ಜಾತಿಗಳು


ಕುರುಬ ಗೌಡರ ಇತಿಹಾಸ ಕತೆಗಳು

ಕುರುಬ ಗೌಡರ ಜನಪದ ಕಲೆಗಳು

ಕುರುಬ ಗೌಡರ ಧರ್ಮಕ್ಷೇತ್ರಗಳು

ಕುರುಬ ಗೌಡ ಇತಿಹಾಸ ಪುರುಷರು


ಕುರುಬ ಗೌಡರು ಇಂದು

ಅನಾದಿ ಕಾಲದಿಂದಲೂ ಹಲವಾರು ಕಸಬುಗಳನ್ನು ಮಾಡಿಕೊoಡಿದ್ದ ಕುರುಬ ಗೌಡರು , ವಿದ್ಯಾಬ್ಯಾಸದ ಕಡೆ ಹೆಚ್ಚು ಗಮನ ಕೊಡಲಿಲ್ಲ. ಪಾಳೆಗಾರರು, ನಾಯಕರು , ಸಾಮ್ರಾಜ್ಯ ಶಾಹಿಗಳು , ಸಾಮಂತ ರಾಜರು, ಸೈನಿಕರು ಆಗಿದ್ದ ಕುರುಬ ಗೌಡರು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಕಡೆಗನಿಸಲ್ಪಟ್ಟರು ಮತ್ತು ತುಂಬಾ ಹಿಂದುಳಿದರು , ಹೊಸ ರಾಜಕೀಯ ಬೆಳವಣಿಗೆಗಳು ಅವರ ಅರಿವಿಗೆ ಬರುವುದು ನಿದಾನವಾಹಿತು. ಬ್ರಿಟಿಷರ ವಿರುದ್ದ ಹೋರಾಡಿದ ಹೋಳ್ಕರ್ ಮಹಾರಾಜರು ಹಾಗು ಸಂಗೊಳ್ಳಿ ರಾಯಣ್ಣನಂತ ದೇಶ ಪ್ರೇಮಿಗಳ ಕಾರಣ, ಬ್ರಿಟಿಷರು ಕುರುಬರನ್ನು ರಾಜ್ಯ ಆಡಳಿತದಿಂದ ದೂರವಿಟ್ಟರು, ಉತ್ತರ ಕರ್ನಾಟಕದ ಮುಸಲ್ಮಾನ ದೊರೆಗಳು ತಮ್ಮ ವಿಜಯನಗರದ ದ್ವೇಷದಿಂದ ಕುರುಬರನ್ನು ಹಿಂಸಿಸಿದರು. ಆದರೆ ಭಾರತದ ಸ್ವತಂತ್ರದ ನಂತರ ಅವರಿಗೆ ಸಿಗಬೇಕಾದ ಸೌಲಬ್ಯಗಳು ಸಿಗತೊಡಗಿದವು ಆಗು ಅವರು ವಿದ್ಯಾಬ್ಯಾಸ ಮಾಡಲು ಅನುವುಮಾಡಿಕೊಟ್ಟಿತು. ಬೇರೆ ಸಮುದಾಯಗಳಿಗೆ ಹೋಲಿಸಿದರೆ ಕುರುಬರು ವಿದ್ಯಾಬ್ಯಾಸದಲ್ಲಿ ಮುಂದೆ ಬರುವುದು ತುಸು ನಿದಾನವಾದರು ತುಂಬಾ ಮುನ್ನಡೆದಿದ್ದಾರೆ . ಮತ್ತೆ ಕರ್ನಾಟಕವನ್ನು ಆಳಿ ವಿಜಯನಗರದ ಸುವರ್ಣ ಯುಗಕ್ಕೆ ಕೊಂಡೊಯುವ ಕಾಲ ಬಂದಿದೆ ಎಂದು ಹಲವರ ಬಾವನೆ. ರವಿ ನಾಗರಜ್ (ಕೆರೆಬನ್ದಿ)ದೊದ್ದಕರದೆ ಹಾಸನ





1 comment: